ಬೆಂಗಳೂರು: ‘ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಬೇಕು’ ಎಂದು ಒತ್ತಾಯಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್ಯುಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರೇಸ್ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನ ಎದುರು ಸೇರಿದ್ದ ಕಾರ್ಯಕರ್ತರು, ‘ಪರೀಕ್ಷೆ ಮುಂದೂಡಿ’ ಎಂಬ ಘೋಷಣಾ ಫಲಕ ಪ್ರದರ್ಶಿಸಿದರು.
‘ಕೊರೊನಾ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ನೀಟ್ ಹಾಗೂ ಜೆಇಇ ಪರೀಕ್ಷೆ ಮಾಡುತ್ತಿರುವುದು ಖಂಡನೀಯ. ಈಗ ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುಲು ತೊಂದರೆ ಆಗಲಿದೆ. ಬಡ ಮಕ್ಕಳು ಉಳಿದುಕೊಳ್ಳಲು ಸಹ ಸಮಸ್ಯೆ ಉಂಟಾಗಲಿದೆ’ ಎಂದು ಪ್ರತಿಭಟನಾಕಾರರು ತಿಳಿಸಿದರು.
‘ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ಪರೀಕ್ಷೆಯನ್ನು ಮುಂದೂಡಬೇಕು’ ಎಂದು ಅವರು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.