ADVERTISEMENT

ಔರಾದ್‌: ತಹಶೀಲ್ದಾರ್ ನಾಗಯ್ಯ ಹಿರೇಮಠ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 16:13 IST
Last Updated 5 ಫೆಬ್ರುವರಿ 2024, 16:13 IST
ಔರಾದ್‌ ತಹಶೀಲ್ದಾರ್ ನಾಗಯ್ಯ ಹಿರೇಮಠ (ಎಡದಿಂದ ಮೊದಲನೆಯವರು) ಅವರನ್ನು ನಿರ್ಗಮಿತ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಸ್ವಾಗತಿಸಿದರು
ಔರಾದ್‌ ತಹಶೀಲ್ದಾರ್ ನಾಗಯ್ಯ ಹಿರೇಮಠ (ಎಡದಿಂದ ಮೊದಲನೆಯವರು) ಅವರನ್ನು ನಿರ್ಗಮಿತ ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಸ್ವಾಗತಿಸಿದರು   

ಔರಾದ್: ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ ನಾಗಯ್ಯ ಹಿರೇಮಠ ಸೋಮವಾರ ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಔರಾದ್‌ನಿಂದ ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲ್ಲೂಕಿಗೆ ವರ್ಗಾವಣೆಯಾದ  ಗ್ರೇಡ್-1 ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ ಅವರು ನೂತನ ತಹಶೀಲ್ದಾರ್ ಹಿರೇಮಠ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನಾಗಯ್ಯ ಹಿರೇಮಠ ಅವರು ಕಲಬುರಗಿ ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.