ADVERTISEMENT

ಬೀದರ್ | ರೈತರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ: ನಿಖಿಲ್ ಕುಮಾರಸ್ವಾಮಿ

ಬೆಳೆ ಹಾನಿ ಪ್ರದೇಶಕ್ಕೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 6:43 IST
Last Updated 17 ಸೆಪ್ಟೆಂಬರ್ 2025, 6:43 IST
ಬೀದರ್ ತಾಲ್ಲೂಕಿನ ವಿವಿಧ‌ ಗ್ರಾಮಗಳಿಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು
ಬೀದರ್ ತಾಲ್ಲೂಕಿನ ವಿವಿಧ‌ ಗ್ರಾಮಗಳಿಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಬೆಳೆ ಹಾನಿ ಪರಿಶೀಲಿಸಿದರು   

ಬೀದರ್: ‘ಭಾರಿ ಮಳೆಯಿಂದ ಜಿಲ್ಲೆಯಲ್ಲಿ ವ್ಯಾಪಕ ಹಾನಿಯಾದರೂ ಕೃಷಿ ಸಚಿವ ಚಲುವರಾಯ ಸ್ವಾಮಿ ಜಿಲ್ಲೆಗೆ ಭೇಟಿ ನೀಡಿಲ್ಲ. ಇದು ಸರಿಯಲ್ಲ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಮಾತನಾಡಿದರು.

‘ನಾನು ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಸಾಕಷ್ಟು ಜನರು ಮನೆ ಕಳೆದುಕೊಂಡು ಸಮಸ್ಯೆಗೆ ಸಿಲುಕಿದ್ದಾರೆ’ ಎಂದರು.

ADVERTISEMENT

‘ರಾಜ್ಯ ಸರ್ಕಾರ ಕೂಡಲೇ ಬೆಳೆ ಕಳೆದುಕೊಂಡ ರೈತರ ಮತ್ತು ಮನೆ ಹಾನಿಯಾದ ಸಂತ್ರಸ್ತರ ನೆರವಿಗೆ ಧಾವಿಸಬೇಕು. ಮಳೆಯಿಂದಾಗಿ ಉಂಟಾಗಿರುವ ಹಾನಿಯ ಬಗ್ಗೆ ನಾನು ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿ ಕೇಂದ್ರದಿಂದಲೂ ಪರಿಹಾರ ನೀಡುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ರೈತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಸರ್ಕಾರ ಕೈಗೊಂಡಿರುವ ನೆರೆ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದರು.

ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಮರಕಲ್, ಅಲಿಯಂಬರ್, ಇಸ್ಲಾಂಪೂರ, ಜಾಂಪಾಡ್ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿದರು.

ಮರಕಲ್ ಹಾಗೂ ಇತರೆ ಗ್ರಾಮಗಳಲ್ಲಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ ಪಕ್ಷದಿಂದ ಧನ ಸಹಾಯ ಮಾಡಿದರು.

ಪಕ್ಷದ ಮುಖಂಡ ಬಂಡೆಪ್ಪ ಕಾಶೆಂಪುರ, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ ಸೋಲಪೂರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೇಕರ್, ಪ್ರಮುಖರಾದ ಸೂರ್ಯಕಾಂತ ನಾಗಮಾರಪಳ್ಳಿ, ಐಲಿನ್ ಜಾನ್ ಮಠಪತಿ, ಅಶೋಕ ಕೊಡಗೆ, ಶಾಂತಲಿಂಗ ಸಾಳಗಿ, ರಾಜಶೇಖರ ಜವಳೆ, ದೇವೇಂದ್ರ ಸೋನಿ, ಲಲಿತಾ ಕರಂಜೆ, ಶಿವಪುತ್ರ ಮಾಳಗೆ, ಬಸವರಾಜ ಪಾಟೀಲ ಹಾರೂರಗೇರಿ, ರಾಜು ಚಿಂತಾಮಣಿ, ಸುದರ್ಶನ ಸುಂದರರಾಜ್, ಅಭಿ ಕಾಳೆ, ಬೊಮಗೊಂಡ ಚಿಟ್ಟಾವಾಡಿ, ರೇವಣಸಿದ್ದಪ್ಪ ಪಾಟೀಲ, ಬಸವರಾಜ ಶಹಾಪೂರೆ, ಮಲ್ಲಿಕಾರ್ಜುನ ನೇಳಗೆ, ಪ್ರಶಾಂತ ವಿಶ್ವಕರ್ಮ, ಸಂಗು ಚಿದ್ರಿ, ಜಾಪೇಡ್ ಕಡ್ಯಾಳ, ತಾನಾಜಿ ತೋರಣೇಕರ್, ಮನೋಹರ್ ದಂಡೆ, ಅರುಣಕುಮಾರ ಹಾಗೂ ತರುಣ್ ನಾಗಮಾರಪಳ್ಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.