ADVERTISEMENT

ಬೀದರ್‌ಗೆ ಎಂಜಿನಿಯರಿಂಗ್ ಕಾಲೇಜು ಇಲ್ಲ: ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 18:51 IST
Last Updated 17 ಫೆಬ್ರುವರಿ 2022, 18:51 IST
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ   

ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ವತಿಯಿಂದ ಬೀದರ್‌ ಜಿಲ್ಲೆಯಲ್ಲಿ ಹೊಸ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸುವ ಪ್ರಸ್ತಾವವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ವಿಧಾನಸಭೆಯಲ್ಲಿ ಗುರುವಾರ ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ರಮೇಶ ಭೂಸನೂರು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೀದರ್‌ನಲ್ಲಿ ಈಗಾಗಲೇ ಇರುವ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸಾಕಷ್ಟು ಕೋರ್ಸ್‌ಗಳಲ್ಲಿ ಶೇ 50 ರಿಂದ ಶೇ 70 ರಷ್ಟು ಸೀಟುಗಳು ಭರ್ತಿಯಾಗುತ್ತಿಲ್ಲ. ಆದ್ದರಿಂದ ಹೊಸ ಎಂಜಿನಿಯರಿಂಗ್‌ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ ಎಂದರು.

ಎಐಸಿಟಿಇ ನಿಯಮಗಳ ಪ್ರಕಾರ ಈಗಾಗಲೇ ರಾಜ್ಯದಲ್ಲಿರುವ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳಿಗೆ ಮೂಲಭೂತ ಸೌಕರ್ಯವನ್ನು ಒದಗಿಸಲು ಒತ್ತು ನೀಡಲಾಗುತ್ತಿದೆ. ಈ ಎಂಜಿನಿಯರಿಂಗ್‌ ಕಾಲೇಜುಗಳನ್ನು ಬಲವರ್ಧಿಸಲು ಉದ್ದೇಶಿಸಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.