ಬೀದರ್: ಜಿಲ್ಲೆಯಲ್ಲಿ ಭಾನುವಾರ ಸಾಧಾರಣದಿಂದ ಭಾರಿ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಗಡಿಭಾಗದಲ್ಲಿ ಬೆಳಗಿನ ಜಾವ ಮಳೆ ಸುರಿದರೆ, ನಗರ ಪ್ರದೇಶದಲ್ಲಿ ಮಧ್ಯಾಹ್ನ ಮಳೆ ಅಬ್ಬರಿಸಿತು.
ನಗರದಲ್ಲಿ ಮಧ್ಯಾಹ್ನ ಒಂದೂವರೆ ತಾಸು ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಮಲನಗರದಲ್ಲಿ 17 ಮಿ.ಮೀ ಮಳೆ ದಾಖಲಾಗಿದೆ. ಹೊಲಗಳಿಗೆ ಅಪಾರ ನೀರು ನುಗ್ಗಿ ಬೆಳೆ ನೀರು ಪಾಲಾಗಿದೆ.
ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್ ಹಾಗೂ ಚಿಟಗುಪ್ಪದಲ್ಲಿ ಸಾಧಾರಣ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.