ADVERTISEMENT

ಅರ್ಹರ ಮನೆಗಳ ಜಿಪಿಎಸ್‍ಗೆ ಸೂಚನೆ

ಸಂಸದ ಭಗವಂತ ಖೂಬಾರಿಂದ ವಸತಿ ಸಚಿವ ಸೋಮಣ್ಣ ಭೇಟಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 15:08 IST
Last Updated 9 ಸೆಪ್ಟೆಂಬರ್ 2020, 15:08 IST
ಬೆಂಗಳೂರಿನಲ್ಲಿ ಬುಧವಾರ ಸಂಸದ ಭಗವಂತ ಖೂಬಾ ಅವರು ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಭಾಲ್ಕಿ ತಾಲ್ಲೂಕಿನ ವಸತಿ ಯೋಜನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು
ಬೆಂಗಳೂರಿನಲ್ಲಿ ಬುಧವಾರ ಸಂಸದ ಭಗವಂತ ಖೂಬಾ ಅವರು ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಭಾಲ್ಕಿ ತಾಲ್ಲೂಕಿನ ವಸತಿ ಯೋಜನೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು   

ಬೀದರ್: ಭಾಲ್ಕಿ ತಾಲ್ಲೂಕಿನ ವಸತಿ ಯೋಜನೆ ಅರ್ಹ ಫಲಾನುಭವಿಗಳ ಮನೆಗಳ ಜಿಪಿಎಸ್ ಮಾಡಲು ವಸತಿ ಸಚಿವ ವಿ. ಸೋಮಣ್ಣ ಅವರು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಕಾಲಹರಣ ಮಾಡುವ ಪಿಡಿಒಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನೇ ನೆಪ ಮಾಡಿಕೊಂಡು ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳ ಜಿಪಿಎಸ್ ಮಾಡುತ್ತಿಲ್ಲ. ವಿನಾಕಾರಣ ವಿಳಂಬ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದಾರೆ. ಹಣ ಬಿಡುಗಡೆಯಾಗದ ಕಾರಣ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಚಿವರ ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ.

ADVERTISEMENT

ಇದೀಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ತಲಾ 20 ಮನೆಗಳು ಮಂಜೂರಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ವಸತಿ ರಹಿತ ಅರ್ಹರಿಗೆ ಮನೆ ಹಂಚಿಕೆ ಮಾಡಬೇಕು ಎಂದು ಹೇಳಿದ್ದಾರೆ.

ಯಾರಾದರೂ ಒತ್ತಡ ಹೇರಿದ್ದಲ್ಲಿ ಅಧಿಕಾರಿಗಳು ತಮ್ಮ ಗಮನಕ್ಕೆ ತರಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ತಪ್ಪು ಮಾಡಿಸುವವರು, ಆರೋಪ ಬಂದಾಗ ಅಧಿಕಾರಿಗಳ ಜತೆಗೆ ಇರುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.