ADVERTISEMENT

ಎನ್ಆರ್‌ಸಿ: ಸಾರ್ವಜನಿಕ ಸಭೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2020, 20:16 IST
Last Updated 13 ಫೆಬ್ರುವರಿ 2020, 20:16 IST

ಬೆಂಗಳೂರು: ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಯಿಂದ ಜನಸಾಮಾನ್ಯರು ಮತ್ತು ದುಡಿಯುವ ವರ್ಗದ ಮೇಲಾಗುವ ಪರಿಣಾಮಗಳ ಕುರಿತು ಚರ್ಚಿಸಲು ‘ನಾವು ಭಾರತೀಯರು’ ತಂಡವು ಶನಿವಾರ (ಫೆ.15) ಮಧ್ಯಾಹ್ನ 2 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರ್ವಜನಿಕ ಸಭೆ ಆಯೋಜಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಂಡದ ಮುಖ್ಯಸ್ಥ ಫ್ರಾನ್ಸಿಸ್ ಮಾತನಾಡಿ, ‘ಶಾಸಕ ಜಿಗ್ನೇಶ್ ಮೇವಾನಿ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT