ADVERTISEMENT

ಎನ್‍ಎಸ್‍ಎಸ್‍ಕೆ: ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ

ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ನೇತೃತ್ವ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:07 IST
Last Updated 15 ಅಕ್ಟೋಬರ್ 2020, 4:07 IST
ಬೀದರ್ ತಾಲ್ಲೂಕಿನ ಜನವಾಡ ಹತ್ತಿರದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ನಿರ್ದೇಶಕರು
ಬೀದರ್ ತಾಲ್ಲೂಕಿನ ಜನವಾಡ ಹತ್ತಿರದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನೂತನ ನಿರ್ದೇಶಕರು   

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ನೇತೃತ್ವದಲ್ಲಿ ಎಲ್ಲ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಉಮಾಕಾಂತ ನಾಗಮಾರಪಳ್ಳಿ, ಚಂದ್ರಕಾಂತ ಹಿಪ್ಪಳಗಾಂವ್, ಬಾಲಾಜಿ ಬೆನಕನಳ್ಳಿ, ಶಿವಬಸಪ್ಪ ತ್ರಿಪುರಾಂತ, ಶಂಕರೆಪ್ಪ ಅತಿವಾಳ, ಸಿದ್ರಾಮ ಬರೂರ(ಕೆ), ಸಿದ್ರಾಮ ಜಲಸಂಘ್ವಿ, ರಾಜಕುಮಾರ ಗಾದಗಿ, ಸೀತಾರಾಮ ಚಿಂತಾಕಿ, ವಿಜಯಕುಮಾರ ಸಿತಾಳಗೇರಾ, ಮಲ್ಲಮ್ಮ ಚಾಂಬೋಳ, ಶೋಭಾವತಿ ಬಲ್ಲೂರ(ಜೆ) ಹಾಗೂ ಝರೆಪ್ಪ ಮಲ್ಲಪ್ಪ ಮಮದಾಪೂರ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್ ಅವರು ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಿದರು.

ADVERTISEMENT

ಎಲ್ಲ ಜನಪ್ರತಿನಿಧಿಗಳು, ಸದಸ್ಯ ರೈತರು ಹಾಗೂ ರೈತರ ಸಹಕಾರದಿಂದ ಕಾರ್ಖಾನೆಯ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ಸಾಧ್ಯವಾಗಿದೆ ಎಂದು ಉಮಾಕಾಂತ ನಾಗಮಾರಪಳ್ಳಿ ಪ್ರತಿಕ್ರಿಯಿಸಿದರು.

ಉಮಾಕಾಂತ ನಾಗಮಾರಪಳ್ಳಿ ಅವರು ಕಾರ್ಖಾನೆಯ ಅಧ್ಯಕ್ಷರಾಗಿ ಪುನರಾಯ್ಕೆಯಾಗುವುದು ನಿಶ್ಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.