ADVERTISEMENT

ಬೀದರ್: ಬಿಜೆಪಿ ಕಟ್ಟಡ ಕಾಮಗಾರಿಗೆ ₹ 1 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 11:41 IST
Last Updated 16 ಜುಲೈ 2021, 11:41 IST
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರು ಬೀದರ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ಪಕ್ಷದ ಘಟಕದ ಕಟ್ಟಡ ಕಾಮಗಾರಿಗೆ ₹ 1 ಲಕ್ಷ ದೇಣಿಗೆಯ ಚೆಕ್ ನೀಡಿದರು. ಈಶ್ವರಸಿಂಗ್ ಠಾಕೂರ್, ರಘುನಾಥ ಮಲ್ಕಾಪುರೆ, ಶಿವಾನಂದ ಮಂಠಾಳಕರ್ , ಡಿ.ಕೆ. ಸಿದ್ರಾಮ ಇದ್ದಾರೆ
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಅವರು ಬೀದರ್‌ನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ಪಕ್ಷದ ಘಟಕದ ಕಟ್ಟಡ ಕಾಮಗಾರಿಗೆ ₹ 1 ಲಕ್ಷ ದೇಣಿಗೆಯ ಚೆಕ್ ನೀಡಿದರು. ಈಶ್ವರಸಿಂಗ್ ಠಾಕೂರ್, ರಘುನಾಥ ಮಲ್ಕಾಪುರೆ, ಶಿವಾನಂದ ಮಂಠಾಳಕರ್ , ಡಿ.ಕೆ. ಸಿದ್ರಾಮ ಇದ್ದಾರೆ   

ಬೀದರ್: ನಗರದ ನೌಬಾದ್‍ನಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಬಿಜೆಪಿ ಜಿಲ್ಲಾ ಘಟಕದ ಕಟ್ಟಡ ಕಾಮಗಾರಿಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ₹ 1 ಲಕ್ಷ ದೇಣಿಗೆ ನೀಡಿದ್ದಾರೆ.

ನಗರಕ್ಕೆ ಗುರುವಾರ ಭೇಟಿ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಮುಖಂಡರಾದ ಡಿ.ಕೆ. ಸಿದ್ರಾಮ, ಈಶ್ವರಸಿಂಗ್ ಠಾಕೂರ್, ಬಸವರಾಜ ಆರ್ಯ, ಅಶೋಕ ಹೊಕ್ರಾಣೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.