ADVERTISEMENT

ಪಾಂಡುರಂಗ ಪಲ್ಲಕ್ಕಿ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 17:15 IST
Last Updated 6 ಜುಲೈ 2020, 17:15 IST
ಆಷಾಢ ಅಂಗವಾಗಿ ಬೀದರ್‌ನಲ್ಲಿ ಸೋಮವಾರ ಪಾಂಡುರಂಗ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಆಷಾಢ ಅಂಗವಾಗಿ ಬೀದರ್‌ನಲ್ಲಿ ಸೋಮವಾರ ಪಾಂಡುರಂಗ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಿತು   

ಬೀದರ್: ಆಷಾಢ ಪ್ರಯುಕ್ತ ನಗರದಲ್ಲಿ ಸೋಮವಾರ ಪಾಂಡುರಂಗನ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಕೊರೊನಾ ಸೋಂಕಿನ ಕಾರಣ ಕೇವಲ ಪುರೋಹಿತರ ನೇತೃತ್ವದಲ್ಲಿ ಮೆರವಣಿಗೆ ನಡೆಸಲಾಯಿತು. ಪಾಂಡುರಂಗ ದೇವರ ಪಾದುಕೆಗೆ ಪೂಜೆ ಹಾಗೂ ದಹಿ ಹಂಡಿ ಒಡೆಯುವ ಕಾರ್ಯಕ್ರಮಗಳು ನಡೆದವು. ಕೊರೊನಾ ಮುಕ್ತಿಗಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.

ಚೌಬಾರಾ ಹತ್ತಿರ ಇರುವ ಐತಿಹಾಸಿಕ ಪಾಂಡುರಂಗ ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯಿತು.
ಮಂದಿರದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗಾದಾ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.