ಬೀದರ್: ಡಿ.ಕೆ. ಶಿವಕುಮಾರ ಯುತ್ ಬ್ರಿಗೇಡ್ ವತಿಯಿಂದ ನಗರದ ಮಂಗಲಪೇಟೆಯ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ನಲ್ಲಿ ಮಂಗಳವಾರ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚರ್ಚ್ ಜಿಲ್ಲಾ ಮೇಲ್ವಿಚಾರಕ ಎಂ.ಪಿ. ಜಯಪಾಲ್, ಎಐಸಿಸಿ ಸದಸ್ಯ ಆನಂದ ದೇವಪ್ಪ, ಬೀದರ್ ನಗರ ಘಟಕದ ಅಧ್ಯಕ್ಷ ಮಹಮ್ಮದ್ ಯುಸೂಫ್, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಸುಧಾಕರ ಕೊಳ್ಳೂರ, ಮುಖಂಡ ರಾಜು ಕಡ್ಯಾಳ, ಡಿ.ಕೆ. ಶಿವಕುಮಾರ ಬ್ರಿಗೇಡ್ ಜಿಲ್ಲಾ ಘಟಕದ ಅಧ್ಯಕ್ಷ ಸುಧಾಕರ ಕೋಟೆ, ನಗರ ಘಟಕದ ಉಪಾಧ್ಯಕ್ಷ ಸ್ಟೆಫೆನ್ ಪಾಲ್ ಜವಾರೆ, ಜಾನ್ಸನ್, ಮುಕೇಶ, ಸ್ಟಿವನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.