ADVERTISEMENT

ಅಂಗಡಿ: ಅವಧಿ ವಿಸ್ತರಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2020, 11:27 IST
Last Updated 9 ಜೂನ್ 2020, 11:27 IST

ಚಿಟಗುಪ್ಪ: ‘ಪಟ್ಟಣದಲ್ಲಿ ಸಂಜೆಯವರೆಗೂ ಅಂಗಡಿ ತೆರೆಯಲು ತಾಲ್ಲೂಕು ಆಡಳಿತ ಅನುಮತಿ ನೀಡಬೇಕು’ ಎಂದು ಪುರಸಭೆ ಮಾಜಿ ಸದಸ್ಯರಾದ ಮಲ್ಲಿಕಾರ್ಜುನ ಪಾಟೀಲ, ಸುಭಾಷ ಕುಂಬಾರ ಆಗ್ರಹಿಸಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಾಲ್ಲೂಕು ಆಡಳಿತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆವರೆಗೂ ಅಂಗಡಿಗಳನ್ನು ತೆರೆಯಲು ಆದೇಶ ನೀಡಿದೆ. ಸುತ್ತಲಿನ ಗ್ರಾಮಗಳಿಂದ ಜನ ಬರುವುದರಿಂದ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಲ್ಲರೂ ಮಾಸ್ಕ್ ಧರಿಸುತ್ತಿಲ್ಲ. ಈ ಜನದಟ್ಟಣೆ ನಿಯಂತ್ರಿಸಲು ತಕ್ಷಣ ಸಂಜೆಯವರೆಗೂ ಅಂಗಡಿಗಳು ತೆರೆದು ವ್ಯವಹಾರ ನಡೆಸಲು ಅನುಮತಿ ನೀಡಿಬೇಕು. ಇದರಿಂದ ಜನದಟ್ಟಣೆ ಆಗುವುದಿಲ್ಲ. ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT