ಬಸವಕಲ್ಯಾಣ: ನಗರದ ತ್ರಿಪುರಾಂತದಲ್ಲಿನ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಆರಂಭೋತ್ಸವ ಆಯೋಜಿಸಿ, ಮಕ್ಕಳಿಗೆ ಸಿಹಿ ಹಾಗೂ ಹೂಗುಚ್ಛ ನೀಡಿ ಸ್ವಾಗತಿಸಿಕೊಳ್ಳಲಾಯಿತು.
ಶಾಲೆಗೆ ಸುಣ್ಣ, ಬಣ್ಣ ಹಚ್ಚಿ ಸಿಂಗರಿಸಲಾಗಿತ್ತು. ಭಾವಚಿತ್ರದ ಪೂಜೆ ನೆರವೇರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಪುಂಡಲೀಕ, ಬಾಲಕೃಷ್ಣ ಪಾಟೀಲ, ಗಿರಿಧರ ಧಾನೂರೆ, ನಾಸೀರ ಪಟೇಲ, ಮುಖ್ಯ ಶಿಕ್ಷಕ ಶರಣಪ್ಪ ವಾಡೇಕರ, ನಾಗನಾಥರೆಡ್ಡಿ ಹಾಗೂ ಶಿಕ್ಷಕರು, ಪಾಲಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.