ADVERTISEMENT

ವಿದ್ಯುತ್ ಅವಘಡ: ಎಚ್ಚರ ವಹಿಸಿ

ಜೆಸ್ಕಾಂ ಅಧಿಕಾರಿಗಳಿಗೆ ಸಚಿವರ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2020, 13:57 IST
Last Updated 12 ಅಕ್ಟೋಬರ್ 2020, 13:57 IST
ಪ್ರಭು ಚವಾಣ್‌
ಪ್ರಭು ಚವಾಣ್‌   

ಬೀದರ್: ಮಳೆಗಾಲ ಸಂದರ್ಭದಲ್ಲಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ, ಗಾಳಿಯಿಂದ ಅಲ್ಲಲ್ಲಿ ವಿದ್ಯುತ್ ತಂತಿಗಳು ಕತ್ತರಿಸಿ ಬೀಳುವ, ಶಾರ್ಟ್ ಸರ್ಕೀಟ್‍ನಂತಹ ಪ್ರಕರಣಗಳು ಸಂಭವಿಸುವ ಸಾಧ್ಯತೆ ಇರುತ್ತವೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರ ಜ್ಯೋತಿ ಹಾಗೂ ಪಂಡಿತ ದೀನ ದಯಾಳ್ ಉಪಾಧ್ಯಾಯ ಯೋಜನೆ ಅಡಿಯಲ್ಲಿ ಸಾಕಷ್ಟು ಕಳಪೆ ಕಾಮಗಾರಿಗಳು ನಡೆದಿರುವ ಬಗ್ಗೆ ದೂರುಗಳಿವೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗುವ ಸನ್ನಿವೇಶ ಉಂಟಾದಲ್ಲಿ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಎಲ್ಲಿಯಾದರೂ ಟ್ರಾನ್ಸ್‍ಫಾರ್ಮರ್‍ಗಳು ಕೆಟ್ಟು ಹೋದರೆ ಕೂಡಲೇ ದುರಸ್ತಿ ಕಾರ್ಯ ಕೈಗೊಂಡು ರೈತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ತ್ರೀಫೇಸ್, ಟೂ ಫೇಸ್ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ನೀಡುತ್ತಿರಬೇಕು. ನಿಗಮಗಳಿಂದ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಬೇಗ ಮುಗಿಸಬೇಕು ಎಂದು ತಾಕೀತು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.