ADVERTISEMENT

ಪ್ರಸನ್ನಲಕ್ಷ್ಮಿಗೆ ವೇದಮಾತಾ ಗಾಯತ್ರಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 9 ಮೇ 2022, 14:34 IST
Last Updated 9 ಮೇ 2022, 14:34 IST
ಪ್ರಸನ್ನಲಕ್ಷ್ಮಿ ದೇಶಪಾಂಡೆ
ಪ್ರಸನ್ನಲಕ್ಷ್ಮಿ ದೇಶಪಾಂಡೆ   

ಬೀದರ್: ನಗರದ ಸಮಾಜ ಸೇವಕಿ ಪ್ರಸನ್ನಲಕ್ಷ್ಮಿ ದೇಶಪಾಂಡೆ ಅವರು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ 2022ನೇ ಸಾಲಿನ ವೇದಮಾತಾ ಗಾಯತ್ರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸಾಮಾಜಿಕ, ಸಾಹಿತ್ಯ ಹಾಗೂ ಸಾಂಸ್ಕøತಿಕ ಕ್ಷೇತ್ರದ ಸೇವೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಮೇ 10 ರಂದು ಮಧ್ಯಾಹ್ನ 3ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT