ADVERTISEMENT

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಶಾಸಕ ರಾಜಶೇಖರ ಪಾಟೀಲ

chitaguppa

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2023, 12:33 IST
Last Updated 28 ಮಾರ್ಚ್ 2023, 12:33 IST
ಚಿಟಗುಪ್ಪ ಪಟ್ಟಣದಲ್ಲಿ ಮನೆ ನಿರ್ಮಾಣ ಸಮಾರಂಭವನ್ನು ಶಾಸಕ ರಾಜಶೇಖರ ಪಾಟೀಲ ಉದ್ಘಾಟಿಸಿದರು
ಚಿಟಗುಪ್ಪ ಪಟ್ಟಣದಲ್ಲಿ ಮನೆ ನಿರ್ಮಾಣ ಸಮಾರಂಭವನ್ನು ಶಾಸಕ ರಾಜಶೇಖರ ಪಾಟೀಲ ಉದ್ಘಾಟಿಸಿದರು   

ಚಿಟಗುಪ್ಪ: ‘ಹುಮನಾಬಾದ್ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಾಗಿದೆ’ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಪಟ್ಟಣದಲ್ಲಿ ಪಿಎಂಎವೈ ಯೋಜನೆಯ ಬಡ ವಸತಿ ರಹಿತ ಫಲಾನುಭವಿಗಳ 545 ಮನೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಹುಮನಾಬಾದ್‌ ಹಾಗೂ ಚಿಟಗುಪ್ಪವನ್ನು ಅವಳಿ ಪಟ್ಟಣಗಳನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಏಕಕಾಲಕ್ಕೆ ಎರಡು ಪಟ್ಟಣಗಳಲ್ಲಿ ಸಮಾನವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ. ನಾಗರಿಕರಿಗೆ ಮೂಲ ಸೌಕರ್ಯ ಒದಗಿಸಲು ಶ್ರಮಿಸಲಾಗುತ್ತಿದೆ ಎಂದರು.

ADVERTISEMENT

ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್‌, ಉಪಾಧ್ಯಕ್ಷೆ ಸೌಭಾಗ್ಯ ಸ್ವಾಮಿ, ಹಿರಿಯ ಪುರಸಭೆ ಸದಸ್ಯ ದಿಲೀಪಕುಮಾರ ಬಗ್ದಲಕರ್‌, ಪುರಸಭೆಯ ಕಾಂಗ್ರೆಸ್‌ ಸದಸ್ಯರು ಹಾಗೂ ಗಣ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.