ADVERTISEMENT

ನೀರು ಪೂರೈಕೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 5:37 IST
Last Updated 2 ಡಿಸೆಂಬರ್ 2022, 5:37 IST
ಹುಮನಾಬಾದ್ ಪಟ್ಟಣದ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದ ಶಿವಪುರ ಬಡಾವಣೆ ನಿವಾಸಿಗಳ ಜತೆ ಮುಖ್ಯಾಧಿಕಾರಿ ಶಿವರಾಜ ರಾಠೋಡ ಚರ್ಚಿಸಿದರು
ಹುಮನಾಬಾದ್ ಪಟ್ಟಣದ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದ ಶಿವಪುರ ಬಡಾವಣೆ ನಿವಾಸಿಗಳ ಜತೆ ಮುಖ್ಯಾಧಿಕಾರಿ ಶಿವರಾಜ ರಾಠೋಡ ಚರ್ಚಿಸಿದರು   

ಹುಮನಾಬಾದ್: ಪಟ್ಟಣದ ಶಿವಪುರ ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಇಲ್ಲಿನ ಪುರಸಭೆ ಕಚೇರಿ ಎದುರು ನಿವಾಸಿಗಳು ಪ್ರತಿಭಟನೆ ನಡೆಸಿದರು.

ನಂತರ ಪ್ರಮುಖರು ಮಾತನಾಡಿ, ಶಿವಪುರ್ ಬಡಾವಣೆಯಲ್ಲಿ ಸುಮಾರು 15 ದಿನಗಳಿಂದ ಹನಿ ನೀರು ಬರುತ್ತಿಲ್ಲ. ಅನೇಕ ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಬಂದ ಪುರಸಭೆ ಮುಖ್ಯಾಧಿಕಾರಿ ಶಿವರಾಜ ರಾಠೋಡ, ಹಿಂದೆ ಯಾವ ರೀತಿ ಪಾಳಿಯಂತೆ ನೀರು ಬರುತ್ತಿತ್ತು ಅದರಂತೆ ಮುಂದಿನ ದಿನಗಳು ನೀರು ಪೂರೈಸಲಾಗುವುದು. ಇಂದು ಸಂಜೆವರೆಗೂ ನೀರು ಬರುತ್ತದೆ. ಮುಂದೆ ಈ ರೀತಿ ಸಮಸ್ಯೆ ಆಗುವುದಿಲ್ಲ ಎಂದು ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

ADVERTISEMENT

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಮೇಶ್ ಕಲ್ಲೂರ್ ಸೇರಿ ನಿವಾಸಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.