ಬೀದರ್: ಪೊಲೀಸ್ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ ಹಾಗೂ ಟಿಇಟಿ ಕುರಿತು ಸ್ಪರ್ಧಾ ಸಂಕಲ್ಪ ಅಕಾಡೆಮಿಯು ಜ.31 ರಂದು ಬೆಳಿಗ್ಗೆ 10ಕ್ಕೆ ನಗರದ ನೆಹರೂ ಕ್ರೀಡಾಂಗಣ ಸಮೀಪದ ಸಾಯಿ ಆದರ್ಶ ಶಾಲೆಯಲ್ಲಿ ಉಚಿತ ಕಾರ್ಯಾಗಾರ ಹಮ್ಮಿಕೊಂಡಿದೆ.
ವಿಷಯ ತಜ್ಞರು ಮಾರ್ಗದರ್ಶನ ಮಾಡಲಿದ್ದಾರೆ. ಜಿಲ್ಲೆಯ ಅಭ್ಯರ್ಥಿಗಳು ಕಾರ್ಯಾಗಾರದ ಪ್ರಯೋಜನ ಪಡೆಯಬೇಕು ಎಂದು ಸಂಸ್ಥೆಯ ಮುಖ್ಯಸ್ಥ ನಾಗೇಶ ಸ್ವಾಮಿ ಹಾಗೂ ಮನೋಜಕುಮಾರ ಬುಕ್ಕಾ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗೆ ಮೊ: 99025 80095 ಅಥವಾ 72595 25145ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.