ಔರಾದ್: ತಾಲ್ಲೂಕಿನ ಗ್ರಾಮೀಣ ಭಾಗದ ಇಬ್ಬರು ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ ಸಾಧನೆ ಮಾಡಿದ್ದಾರೆ.
ಇಲ್ಲಿಯ ಶಾಹೀನ್ ಕಾಲೇಜಿನಲ್ಲಿ ಓದುತ್ತಿರುವ ಶ್ರೀನಿವಾಸ ಗಾದಗೆ ಹಾಗೂ ರುಷಿಕೇಶ್ ಗೋಪಾಲರೆಡ್ಡಿ 600ಕ್ಕೆ 600 ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ ಅಬ್ದುಲ್ ಖದೀರ್, ಪ್ರಾಂಶುಪಾಲ ಗಣೇಶ ಜೋಜನೇಕರ್ ಅವರು ಸಂತಸ ವ್ಯಕ್ತಪಡಿಸಿ, ಮಕ್ಕಳನ್ನು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.