ADVERTISEMENT

ಡಾಬಾ ಮೇಲೆ ದಾಳಿ: ಮದ್ಯ ಜಪ್ತಿ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 5:04 IST
Last Updated 21 ಮಾರ್ಚ್ 2023, 5:04 IST

ಭಾಲ್ಕಿ: ತಾಲ್ಲೂಕಿನ ಕೇಸರ ಜವಳಗಾ ಕ್ರಾಸ್ ಮುಖ್ಯರಸ್ತೆ ಪಕ್ಕದಲ್ಲಿರುವ ಶಿವಸಾಯಿ ಡಾಬಾ ಮೇಲೆ ದಾಳಿ ನಡೆಸಿರುವ ಅಬಕಾರಿ ಸಿಬ್ಬಂದಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8.640 ಲೀ ಮದ್ಯ, 35.400 ಲೀ ಬಿಯರ್ ಜಪ್ತಿ ಮಾಡಿದ್ದಾರೆ. ಆರೋಪಿ ದತ್ತಾತ್ರೇಯ ಚಂದ್ರಕಾಂತ ಹಣಮಶೆಟ್ಟಿ ಪರಾರಿಯಾಗಿದ್ದಾರೆ. ಈತನ ವಿರುದ್ಧ ಭಾಲ್ಕಿ ವಲಯದ ಅಬಕಾರಿ ಉಪ ನಿರೀಕ್ಷಕಿ ಪ್ರೀತಿ ರಾಠೋಡ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯಲ್ಲಿ ಸುನಿಲ್ ಶಿಂಧೆ, ವೈಜಿನಾಥ ಪಾಟೀಲ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.