ADVERTISEMENT

ಸೆಕೆಯಿಂದ ಬೇಸತ್ತಿದ್ದ ಜನತೆಗೆ ತಂಪೆರೆದ ವರುಣ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 15:57 IST
Last Updated 6 ಸೆಪ್ಟೆಂಬರ್ 2020, 15:57 IST
ಕಮಲನಗರದಲ್ಲಿ ಭಾನುವಾರ ಸುರಿದ ಮಳೆ
ಕಮಲನಗರದಲ್ಲಿ ಭಾನುವಾರ ಸುರಿದ ಮಳೆ   

ಬೀದರ್: ಜಿಲ್ಲೆಯ ಕೆಲ ಪ್ರದೇಶದಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ. ಹವಾಮಾನ ಇಲಾಖೆಯ ಮಳೆ ಮುನ್ಸೂಚನೆಯ ಹೊರತಾಗಿಯೂ ಮಂಗಳವಾರ ಬಿಸಿಲು ಹಾಗೂ ಸೆಕೆಯ ವಾತಾವರಣವಿತ್ತು. ಸಂಜೆ ಸುರಿದ ಮಳೆಯಿಂದಾಗಿ ವಾತಾವರಣ ತಂಪಾಯಿತು.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಭಾನುವಾರ ಅರ್ಧಗಂಟೆ ಉತ್ತಮ ಮಳೆಯಾಗಿದೆ. ಕಮಲನಗರದಲ್ಲಿ ಎರಡು ತಾಸು ಮಳೆಯಾದರೆ, ಔರಾದ್‌ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜಿಟಿ ಜಿಟಿ ಮಳೆ ಸುರಿದಿದೆ. ಹುಮನಾಬಾದ್, ಭಾಲ್ಕಿ ಹಾಗೂ ಚಿಟಗುಪ್ಪದಲ್ಲಿ ಮೋಡ ಕವಿದ ವಾತಾವರಣ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT