ADVERTISEMENT

ಬೀದರ್‌: ಜಿಲ್ಲೆಯ ವಿವಿಧೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2021, 15:03 IST
Last Updated 17 ಆಗಸ್ಟ್ 2021, 15:03 IST
ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಸುರಿಯುವ ಮಳೆಯಲ್ಲೇ ದ್ವಿಚಕ್ರವಾಹನದ ಮೇಲೆ ಸಾಗಿದ ದಂಪತಿ
ಬೀದರ್‌ನ ಅಂಬೇಡ್ಕರ್‌ ವೃತ್ತದಲ್ಲಿ ಸುರಿಯುವ ಮಳೆಯಲ್ಲೇ ದ್ವಿಚಕ್ರವಾಹನದ ಮೇಲೆ ಸಾಗಿದ ದಂಪತಿ   

ಬೀದರ್‌: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಕಮಲನಗರ ತಾಲ್ಲೂಕಿನ ಭಂಡಾರ ಕುಮಟಾ, ಡೊಂಗರಗಾವ್ ಗ್ರಾಮದ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿ ಬೆಳೆ ಸಂಪೂರ್ಣ ನೆಲಕ್ಕುರುಳಿದೆ.

ಬೀದರ್, ಭಾಲ್ಕಿ, ಔರಾದ್, ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಒಂದು ತಾಸು ಮಳೆ ಸುರಿದ ಕಾರಣ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು. ಅಲ್ಲಲ್ಲಿ ನೀರು ಸಂಗ್ರಹವಾಗಿ ವಾಹನಗಳ ಓಡಾಟ ಹಾಗೂ ಪಾದಚಾರಿಗಳ ಸಂಚರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT