ಬೀದರ್: ಜಿಲ್ಲೆಯ ವಿವಿಧೆಡೆ ಮಂಗಳವಾರ ಸಾಧಾರಣ ಮಳೆ ಸುರಿದಿದೆ. ಕಮಲನಗರ ತಾಲ್ಲೂಕಿನ ಭಂಡಾರ ಕುಮಟಾ, ಡೊಂಗರಗಾವ್ ಗ್ರಾಮದ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸಿ ಬೆಳೆ ಸಂಪೂರ್ಣ ನೆಲಕ್ಕುರುಳಿದೆ.
ಬೀದರ್, ಭಾಲ್ಕಿ, ಔರಾದ್, ಕಮಲನಗರ, ಹುಲಸೂರು ಹಾಗೂ ಚಿಟಗುಪ್ಪ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ನಗರದಲ್ಲಿ ಸಂಜೆ ಒಂದು ತಾಸು ಮಳೆ ಸುರಿದ ಕಾರಣ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು. ಅಲ್ಲಲ್ಲಿ ನೀರು ಸಂಗ್ರಹವಾಗಿ ವಾಹನಗಳ ಓಡಾಟ ಹಾಗೂ ಪಾದಚಾರಿಗಳ ಸಂಚರಕ್ಕೆ ಕೆಲ ಹೊತ್ತು ಅಡಚಣೆ ಉಂಟಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.