ಬೀದರ್: ಇಲ್ಲಿಯ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜಯಂತಿ ಆಚರಿಸಲಾಯಿತು.
ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಎಐಸಿಸಿ ಸದಸ್ಯ ಆನಂದ ದೇವಪ್ಪ, ಮುಖಂಡರಾದ ಶಂಕರರಾವ್ ದೊಡ್ಡಿ, ರೋಹಿದಾಸ ಘೋಡೆ, ರಾಜಶೇಖರ ಪಾಟೀಲ ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಅಬ್ದುಲ್ ಮನ್ನಾನ್ ಸೇಠ್, ಸಂಜಯ ಜಾಗಿರದಾರ, ಫರೀದ್ಖಾನ್, ಭೋಜಪ್ಪ, ನಿಸಾರ್ ಅಹಮ್ಮದ್, ಶೇಕ್ ಹಾಜಿ, ಲತಾ ರಾಠೋಡ್, ಯಶೋದಮ್ಮ, ಡಿ.ಕೆ. ಸಂಜುಕುಮಾರ, ವಿದ್ಯಾವತಿ, ನಾಗನಾಥ ಪಾಟೀಲ, ಮಿಸ್ಬಾ, ಅನಿಲ್ ಜಾಧವ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.