ADVERTISEMENT

ರಂಗೋಲಿ ಜನಪದ ಸಂಸ್ಕೃತಿ ಪ್ರತೀಕ- ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 15:42 IST
Last Updated 4 ಜನವರಿ 2022, 15:42 IST
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆಯನ್ನು ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ ಉದ್ಘಾಟಿಸಿದರು. ಮಲ್ಲಮ್ಮ ಸಂತಾಜಿ, ನೀಲಗಂಗಾ ಹೆಬ್ಬಾಳೆ, ಭಾರತಿ ವಸ್ತ್ರದ್, ಸುನೀತಾ ಕೂಡ್ಲಿಕರ್, ರಾಜಕುಮಾರ ಹೆಬ್ಬಾಳೆ, ಸವಿತಾ ಹೆಗ್ಗೆ ಇದ್ದರು
ಬೀದರ್‌ನ ಕರ್ನಾಟಕ ಸಾಹಿತ್ಯ ಸಂಘದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆಯನ್ನು ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ ಉದ್ಘಾಟಿಸಿದರು. ಮಲ್ಲಮ್ಮ ಸಂತಾಜಿ, ನೀಲಗಂಗಾ ಹೆಬ್ಬಾಳೆ, ಭಾರತಿ ವಸ್ತ್ರದ್, ಸುನೀತಾ ಕೂಡ್ಲಿಕರ್, ರಾಜಕುಮಾರ ಹೆಬ್ಬಾಳೆ, ಸವಿತಾ ಹೆಗ್ಗೆ ಇದ್ದರು   

ಬೀದರ್: ರಂಗೋಲಿ ಜನಪದ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬೀದರ್ ಗ್ರಾಮೀಣ ಪಿಎಸ್‍ಐ ಸುವರ್ಣಾ ನುಡಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನಡೆದ ಜಿಲ್ಲಾಮಟ್ಟದ ರಂಗೋಲಿ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಮಹಿಳೆಯರು ಮನೆ ಅಂಗಳದ ಕಳೆ ಹೆಚ್ಚಿಸಲು ರಂಗೋಲಿ ಬಿಡಿಸುತ್ತಿದ್ದರು. ಆಧುನಿಕತೆ ಭರಾಟೆಯಲ್ಲಿ ರಂಗೋಲಿಯಿಂದ ದೂರ ಸರಿಯುತ್ತಿರುವುದು ಕಳವಳಕಾರಿಯಾಗಿದೆ ಎಂದರು.

ADVERTISEMENT

ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ತಿನ ಕಾರ್ಯದರ್ಶಿ ರಾಜಕುಮಾರ ಹೆಬ್ಬಾಳೆ ಮಾತನಾಡಿ, ಜಾನಪದ ಸಂಸ್ಕøತಿಯನ್ನು ಉಳಿಸಿ ಬೆಳೆಸುವುದು ನಮ್ಮ ಧ್ಯೇಯವಾಗಿದೆ. ಜಿಲ್ಲೆಯ ಅನೇಕ ಕಲಾವಿದರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಾಶನ ಮಂಜೂರು ಮಾಡಿಸಲಾಗಿದೆ ಎಂದು ತಿಳಿಸಿದರು.

ಸುನೀತಾ ಕೂಡ್ಲಿಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಾಹಿತಿ ಭಾರತಿ ವಸ್ತ್ರದ್ ಅಧ್ಯಕ್ಷತೆ ವಹಿಸಿದ್ದರು. ಅಕ್ಕಮಹಾದೇವಿ ಮಹಿಳಾ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ನೀಲಗಂಗಾ ಹೆಬ್ಬಾಳೆ, ಚಿಂತಕಿ ಸವಿತಾ ಹೆಗ್ಗೆ ಉಪಸ್ಥಿತರಿದ್ದರು.

ಮಲ್ಲಮ್ಮ ಸಂತಾಜಿ ಸ್ವಾಗತಿಸಿದರು. ಮಹಾನಂದ ಮಡಕಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.