ADVERTISEMENT

ಔರಾದ್ | ಪಡಿತರ ವಿತರಣೆಯಲ್ಲಿ ವಂಚನೆ: ದೂರು

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 6:17 IST
Last Updated 27 ಡಿಸೆಂಬರ್ 2025, 6:17 IST
ಪಡಿತರ ವಿತರಣೆಯಲ್ಲಿನ ವಂಚನೆ ತಡೆಯುವಂತೆ ಅಹಿಂದ ಯುವ ಸಂಘಟನೆ ಮುಖಂಡರು ಔರಾದ್ ತಹಶೀಲ್ದಾರ್ ಮಹೇಶ ಪಾಟೀಲ ಅವರಿಗೆ ಮನವಿಪತ್ರ ಸಲ್ಲಿಸಿದರು
ಪಡಿತರ ವಿತರಣೆಯಲ್ಲಿನ ವಂಚನೆ ತಡೆಯುವಂತೆ ಅಹಿಂದ ಯುವ ಸಂಘಟನೆ ಮುಖಂಡರು ಔರಾದ್ ತಹಶೀಲ್ದಾರ್ ಮಹೇಶ ಪಾಟೀಲ ಅವರಿಗೆ ಮನವಿಪತ್ರ ಸಲ್ಲಿಸಿದರು   

ಔರಾದ್: ತಾಲ್ಲೂಕಿನ ವಿವಿಧೆಡೆ ಪಡಿತರ ವಿತರಕರು ಫಲಾನುಭವಿಗಳಿಗೆ ಧಾನ್ಯ ವಿತರಣೆಯಲ್ಲಿ ವಂಚಿಸಲಾಗುತ್ತಿದೆ ಎಂದು ಅಹಿಂದ ಯುವ ಘಟಕ ದೂರು ನೀಡಿದೆ.

ಯುವ ಘಟಕದ ರಾಜಾಧ್ಯಕ್ಷ ಲಕ್ಷ್ಮಣ ದೇವಕತೆ ನೇತೃತ್ವದಲ್ಲಿ ಶುಕ್ರವಾರ ತಹಶೀಲ್ದಾರ್ ಮಹೇಶ ಪಾಟೀಲ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿಪತ್ರ ಸಲ್ಲಿಸಿದರು.

ತಾಲ್ಲೂಕಿನ ವಿವಿಧ ತಾಂಡಾ, ಗ್ರಾಮಗಳಲ್ಲಿ ಪಡಿತರ ವಿತರಕರು ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಧಾನ್ಯ ಕೊಡುತ್ತಿಲ್ಲ. ತೂಕದಲ್ಲಿ ವ್ಯತ್ಯಾಸ ಮಾಡಲಾಗುತ್ತಿದೆ. ಬೆರಳು ಗುರುತು ಪಡೆಯಲು ಹಣ ತೆಗೆದುಕೊಳ್ಳುತ್ತಿದ್ದಾರೆ ಈ ಬಗ್ಗೆ ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ರಾಜಕುಮಾರ ಮುದಾಳೆ, ಅಮರೇಶ್ವರ ಸೇರಿದಂತೆ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.