ADVERTISEMENT

ಲಾರಿಗೆ ಕಾರು ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 6 ಮೇ 2022, 12:23 IST
Last Updated 6 ಮೇ 2022, 12:23 IST
ಚಿಟಗುಪ್ಪ ತಾಲ್ಲೂಕಿನ ಮೊಗದಾಳ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದಿರುವುದು
ಚಿಟಗುಪ್ಪ ತಾಲ್ಲೂಕಿನ ಮೊಗದಾಳ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದಿರುವುದು   

ಚಿಟಗುಪ್ಪ: ತಾಲ್ಲೂಕಿನ ಮೊಗದಾಳ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಹೈದರಾಬಾದ್‌ ನಗರದ ಮಾಧಾಪುರ ನಿವಾಸಿ ಹರೀಶ್‌ ಅತ್ತರಕುಮಾರ್‌ (32) ಮೃತಪಟ್ಟವರು.

ಕಾರಿನಲ್ಲಿ ಹೈದರಾಬಾದ್‌ನಿಂದ ಬಸವಕಲ್ಯಾಣಕ್ಕೆ ತೆರಳುತ್ತಿದ್ದಾಗ ಮೊಗದಾಳ ಗ್ರಾಮದ ಬಳಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಸಹ ಪ್ರಯಾಣಿಕರೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೀದರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಸ್ಥಳಕ್ಕೆ ವೃತ್ತ ನಿರೀಕ್ಷಕ ಅಮೂಲ ಕಾಳೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂಬಂಧ ಬೇಮಳಖೇಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.