ADVERTISEMENT

26ಕ್ಕೆ ಸಂವಿಧಾನ ಉಳಿಸಿ, ದೇಶ ಉಳಿಸಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 16:05 IST
Last Updated 23 ಜನವರಿ 2022, 16:05 IST
ಉಮೇಶಕುಮಾರ ಸ್ವಾರಳ್ಳಿಕರ್
ಉಮೇಶಕುಮಾರ ಸ್ವಾರಳ್ಳಿಕರ್   

ಬೀದರ್‌: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಜನವರಿ 26ರ ಸಂಜೆ 4:30ಕ್ಕೆ ನಗರದ ಅಂಬೇಡ್ಕರ್ ವೃತ್ತದ ಬಳಿ 73ನೇ ಗಣರಾಜ್ಯೋತ್ಸವ ಪ್ರಯುಕ್ತ ‘ಸಂವಿಧಾನ ಉಳಿಸಿ, ದೇಶ ಉಳಿಸಿ‘ ಬಹಿರಂಗ ಸಮಾವೇಶ ನಡೆಯಲಿದೆ.

ಆಣದೂರಿನ ಭಂತೆ ಸಂಘ ರಕ್ಕಿತ ಸಾನ್ನಿಧ್ಯ ವಹಿಸುವರು. ಮಹಾರಾಷ್ಟ್ರದ ವಿಚಾರವಾದಿ ಅಮೂಲ್ ಮೇಟಕರಿ ಉದ್ಘಾಟಿಸುವರು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಉಮೇಶಕುಮಾರ ಸ್ವಾರಳ್ಳಿಕರ್ ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ವಿಚಾರವಾದಿ ಶೇಖ್ ಸುಭ್ಹಾನ್‌ಅಲಿ, ಜೆಸ್ಕಾಂ ಲೆಕ್ಕಾಧಿಕಾರಿ ಸುಮಂತ ಕಟ್ಟಿಮನಿ, ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಹೀಮ್‌ ಖಾನ್, ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಮಾಜಿ ಸದಸ್ಯ ವಿಜಯಸಿಂಗ್, ಕೆಎಸ್‌ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಅಬ್ದುಲ್ ಖದೀರ್, ಡಿಎಸ್‌ಎಸ್‌ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಉಮೇಶಕುಮಾರ ಸ್ವಾರಳ್ಳಿಕರ್ ಅಧ್ಯಕ್ಷತೆ ವಹಿಸುವರು ಎಂದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ರಾಜಕುಮಾರ ಮೂಲಭಾರತಿ, ಜಾನ್ಸನ್ ಘೋಡೆ, ಖಂಡಪ್ಪ ಪಾತರಪಳ್ಳಿ, ಸುಧಾಕರ್ ಮಾಳಗೆ, ನರಸಿಂಗ ಸಾಮ್ರಾಟ, ಶಿವಕುಮಾರ ದೇವಕರ್, ಸಂದೀಪ ಕಾಂಟೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.