ಬೀದರ್: ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 90 ಕ್ಕಿಂತ ಅಧಿಕ ಅಂಕ ಪಡೆದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಇತ್ತೀಚಿನ ಒಂದು ಭಾವಚಿತ್ರ ದೃಢೀಕರಿಸಿದ ಅಂಕಪಟ್ಟಿ ಝರಾಕ್ಸ್ ಮತ್ತು ಜಾತಿ ಪ್ರಮಾಣ ಪತ್ರವನ್ನು ಮೇ 25ರ ಒಳಗಾಗಿ ಲಕ್ಷ್ಮೀಬಾಯಿ ಕಮಠಾಣೆ ಶಿಕ್ಷಣ ಮಹಾವಿದ್ಯಾಲಯದಲ್ಲಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಗೆ ತಲುಪಿಸಬೇಕು ಎಂದು ಮಹಾಸಭಾದ ಜಿಲ್ಲಾ ಘಟಕ ಅಧ್ಯಕ್ಷ ವೈಜಿನಾಥ ಕಮಠಾಣೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ. 222373/ 8550001972/ 9448258294 ಸಂಪರ್ಕಿಸಬಹುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.