ADVERTISEMENT

ಔರಾದ್| ಶಿವಾಜಿ ಮುಸ್ಲಿಂ ವಿರೋಧಿ ಅಲ್ಲ: ಶಿವಾಜಿರಾವ ಪಾಟೀಲ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 5:28 IST
Last Updated 20 ಫೆಬ್ರುವರಿ 2026, 5:28 IST
ಔರಾದ್ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಿತು
ಔರಾದ್ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಮೆರವಣಿಗೆ ನಡೆಯಿತು   

ಔರಾದ್: ‘ಛತ್ರಪತಿ ಶಿವಾಜಿ ಮಹಾರಾಜರು ಕೆಲ ರಾಜರ ದಬ್ಬಾಳಿಕೆ ವಿರುದ್ಧ ಹೋರಾಡಿದರೇ ಹೊರತು ಅವರು ಮುಸ್ಲಿಂ ವಿರೋಧಿಯಾಗಿರಲಿಲ್ಲ’ ಎಂದು ಮುಖಂಡ ಶಿವಾಜಿರಾವ ಪಾಟೀಲ ಮುಂಗನಾಳ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿವಾಜಿ ಮಹಾರಾಜರ ಸೈನ್ಯದಲ್ಲಿ ಮುಸ್ಲಿಂ ಸೈನಿಕರಿದ್ದರು. ರಾಜನಿಗೆ ಕೆಲ ಮಹತ್ವದ ಸಲಹೆ ನೀಡಲು ಮುಸ್ಲಿಂ ಅಧಿಕಾರಿಗಳಿದ್ದರು. ಹೀಗಾಗಿ ಶಿವಾಜಿ ಮಹಾರಾಜರನ್ನು ಸರ್ವಧರ್ಮೀಯ ನಾಯಕ ಎಂದು ಹೇಳಬೇಕಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಉಪನ್ಯಾಸ ನೀಡಿದ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ‘ಛತ್ರಪತಿ ಶಿವಾಜಿ ಮಹಾರಾಜರಲ್ಲಿ ದೇಶಪ್ರೇಮದ ಹುಟ್ಟು ಗುಣ ಇತ್ತು. ಅವರೊಬ್ಬರು ಧೈರ್ಯಶಾಲಿ ನಾಯಕ. ಇಂದಿನ ಯುವಕರಿಗೆ ಅವರು ಪ್ರೇರಣೆಯಾಗಬೇಕು’ ಎಂದರು.

ತಹಶೀಲ್ದಾರ್ ಮಹೇಶ ಪಾಟೀಲ ಕಾರ್ಯಕ್ರಮದಲ್ಲಿ ಇರುವ ವಿದ್ಯಾರ್ಥಿಗಳಿಗೆ ಶಿವಾಜಿ ಕುರಿತು ಕೆಲ ಪ್ರಶ್ನೆಗಳು ಕೇಳಿ ಶಿವಾಜಿ ಜೀವನ ಚರಿತ್ರೆ ಓದಿ ತಿಳಿದುಕೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿದರು. ಧೊಂಡಿಬಾ ನರೋಟೆ, ಮುಖಂಡ ಸುಧಾಕರ್ ಕೊಳ್ಳೂರ್, ಸೂರ್ಯಕಾಂತ ಸಿಂಗೆ, ಅಂಬಿಕಾ ಕೇರಬಾ ಪವಾರ್, ಕಲ್ಲಪ್ಪ ದೇಶಮುಖ, ಮಾಣಿಕ ನೇಳಗೆ ಮತ್ತಿತರರು ಇದ್ದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ಔರಾದ್‌ನಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಪುಟ್ಟ ಬಾಲಕಿಯರು ಛತ್ರಪತಿ ಶಿವಾಜಿ ಹಾಗೂ ಜೀಜಾಮಾತಾ ವೇಷ ಧರಿಸಿ ಗಮನ ಸೆಳೆದರು. ತಹಶೀಲ್ದಾರ್ ಮಹೇಶ ಪಾಟೀಲ ತಾಪಂ. ಇಒ ಕಿರಣ ಪಾಟೀಲ ಚಿತ್ರದಲ್ಲಿ ಇದ್ದಾರೆ
ಔರಾದ್ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಇಲ್ಲಿಯ ಘಟಕದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಮೆರವಣಿಗೆ ನಡೆಸಿದರು. ಪರಮೇಶ್ವರ ವಾಘಮಾರೆ ರಾಮ ಭಾಲ್ಕೆ ಮಲ್ಲಿಕಾರ್ಜುನ ಶೆಟಕಾರ ರವುಸಾಬ್ ಬಾಲಾಜಿ ರಾಮ ನರೋಟೆ ಸುಧಾಕರ್ ಕೊಳ್ಳೂರ್ ಸುಜೀತ ರಾಠೋಡ್ ಅನೀಲ ದೇಶಮುಖ ಮತ್ತಿತರರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.