ADVERTISEMENT

ಸಿದ್ದರಾಮಯ್ಯ ಜನ್ಮದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 15:18 IST
Last Updated 12 ಆಗಸ್ಟ್ 2020, 15:18 IST
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತಬೀದರ್‍ನ ಹಾಲು ಮತಗೊಂಡ ವಸತಿ ನಿಲಯದ ಆವರಣದಲ್ಲಿ ಬುಧವಾರ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತಬೀದರ್‍ನ ಹಾಲು ಮತಗೊಂಡ ವಸತಿ ನಿಲಯದ ಆವರಣದಲ್ಲಿ ಬುಧವಾರ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು   

ಬೀದರ್: ಕಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆ ವತಿಯಿಂದ ನಗರದ ಹಾಲು ಮತಗೊಂಡ ವಸತಿ ನಿಲಯದ ಆವರಣದಲ್ಲಿ ಬುಧವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನ ಆಚರಿಸಲಾಯಿತು.

ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ತುಪ್ಪ, ಮೊಸರು ಹಾಗೂ ಹಾಲಿನ ಅಭಿಷೇಕ ಮಾಡಲಾಯಿತು.
ಮುಖಂಡ ಅಮೃತರಾವ್ ಚಿಮಕೋಡೆ, ಜಿಲ್ಲಾ ಪಂಚಾಯಿತಿ ಸದಸ್ಯ ಬಾಬುರಾವ್ ಮಲ್ಕಾಪುರೆ, ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ ಮರ್ಜಾಪುರ, ಮಾಳಪ್ಪ ಅಡಸಾರೆ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT