ADVERTISEMENT

ಜಿಲ್ಲಾ ಜಾನಪದ ಕಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಿದ್ರಾಮ ವಾಘ್ಮಾರೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 14:08 IST
Last Updated 11 ಸೆಪ್ಟೆಂಬರ್ 2021, 14:08 IST
ಸಿದ್ರಾಮ ವಾಘ್ಮಾರೆ
ಸಿದ್ರಾಮ ವಾಘ್ಮಾರೆ   

ಬೀದರ್‌: ಕೇಂದ್ರ ಸಂಸ್ಕೃತಿ ಸಚಿವಾಲಯ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಂದು ಹುಮನಾಬಾದ್‌ನಲ್ಲಿ ನಡೆಯಲಿರುವ ಜಿಲ್ಲಾ ಜಾನಪದ ಕಲಾ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೋಂದಳಿ ಜನಪದ ಕಲಾವಿದ ಸಿದ್ರಾಮ ದಾದಾರಾವ್ ವಾಘ್ಮಾರೆ ಆಯ್ಕೆಯಾಗಿದ್ದಾರೆ.

ಸಿದ್ರಾಮ ವಾಘ್ಮಾರೆ ಅವರು ರಾಜ್ಯ ಮಟ್ಟದ ಗೋಂದಳಿ ಸಮಾವೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಾನಪದ ಅಕಾಡೆಮಿ, ಅಖಿಲ ಭಾರತ 72 ಕನ್ನಡ ಸಾಹಿತ್ಯ ಸಮ್ಮೇಳನ, ಬೀದರ್ ಉತ್ಸವದಲ್ಲಿ ಭಾಗವಹಿಸಿ ಗೋಂದಳಿ ಜನಪದ ಕಲೆ ಪ್ರದರ್ಶಿಸಿದ್ದಾರೆ.

ಜಿಲ್ಲಾ ಮಟ್ಟದ ರಾಜ್ಯೋತ್ಸವ ಗೌರವ, ಜಾನಪದ ಜಿಲ್ಲಾ ಪ್ರಶಸ್ತಿ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳ ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.