ADVERTISEMENT

ಕಾಂಗ್ರೆಸ್‌ ಕಚೇರಿ ಕಟ್ಟಲು ಬೆಳ್ಳಿ ಖಡ್ಗ ಹರಾಜು

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:21 IST
Last Updated 24 ನವೆಂಬರ್ 2020, 16:21 IST

ಬೀದರ್‌: ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಶಿವಶರಣ ಬಿರಾದಾರ ನೀಡಿರುವ ಬೆಳ್ಳಿ ಖಡ್ಗವನ್ನು ಹರಾಜು ಹಾಕಿ ಅದರಿಂದ ಬಂದ ಹಣವನ್ನು ತಾಲ್ಲೂಕಿನಲ್ಲಿ ಪಕ್ಷದ ಕಚೇರಿ ಕಟ್ಟಲು ಬಳಸಿಕೊಳ್ಳಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ನಗರದಲ್ಲಿ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು. ‘ಪಕ್ಷದ ಕಚೇರಿಯೇ ನಮ್ಮ ದೇವಸ್ಥಾನ. ಅದನ್ನು ಮೊದಲು ನಿರ್ಮಿಸಿಕೊಳ್ಳಬೇಕಿದೆ’ ಎಂದು ತಿಳಿಸಿದರು.

‘ಪಕ್ಷವೇ ನಮ್ಮ ಧರ್ಮ, ಕಾಂಗ್ರೆಸ್ ಧ್ವಜವೇ ನಮ್ಮ ಧರ್ಮ ಧ್ವಜ. ಈ ಧರ್ಮ ಧ್ವಜದ ಅಡಿಯಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.