ADVERTISEMENT

15ಕ್ಕೆ ಸರಳ ಮಲ್ಲಣ್ಣ ಪಲ್ಲಕ್ಕಿ ಉತ್ಸವ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2021, 16:06 IST
Last Updated 12 ಅಕ್ಟೋಬರ್ 2021, 16:06 IST
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ಮಲ್ಲಣ್ಣ ದೇವರ ವಿಗ್ರಹ
ಭಾಲ್ಕಿ ತಾಲ್ಲೂಕಿನ ಖಾನಾಪುರದ ಮೈಲಾರ ಮಲ್ಲಣ್ಣ ದೇವಸ್ಥಾನದಲ್ಲಿನ ಮಲ್ಲಣ್ಣ ದೇವರ ವಿಗ್ರಹ   

ಬೀದರ್: ಭಾಲ್ಕಿ ತಾಲ್ಲೂಕಿನ ಖಾನಾಪುರದಲ್ಲಿ ವಿಜಯದಶಮಿ ಅಂಗವಾಗಿ ಅ. 15 ರ ರಾತ್ರಿ 11.30 ರಿಂದ 16 ರ ಬೆಳಿಗ್ಗೆ 6 ರ ವರೆಗೆ ಮಲ್ಲಣ್ಣ ದೇವರ ಪಲ್ಲಕ್ಕಿ ಉತ್ಸವ ಸರಳವಾಗಿ ನಡೆಯಲಿದೆ.

ಕೋವಿಡ್ ಮೂರನೇ ಅಲೆಯ ತಡೆಗೆ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ ಪಲ್ಲಕ್ಕಿ ಉತ್ಸವವನ್ನು ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಂಪ್ರದಾಯದ ಪ್ರಕಾರ ಸರಳವಾಗಿ ಆಚರಿಸಬೇಕು ಎಂದು ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಸೂಚಿಸಿದ್ದಾರೆ ಎಂದು ಮೈಲಾರ ಮಲ್ಲಣ್ಣ ಖಂಡೋಬಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನಂತರಾವ್ ಕುಲಕರ್ಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT