ಬೀದರ್: ನಗರದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಕೌಶಲ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ನಡೆಯಿತು.
ಕೌಶಲಕ್ಕೆ ಸದಾಕಾಲ ಬೇಡಿಕೆ ಇರುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಏನಾದರೊಂದು ಕೌಶಲ ಬೆಳೆಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನೀಲಗಿರಿ ಸಂಸ್ಥೆಯ ಸಂಸ್ಥಾಪಕ ಸಾವಂತ ಸಾಗರ್ ಹೇಳಿದರು.
ಡೀನ್ ಡಾ. ಫಾರೂಕ್, ಶಿವಕುಮಾರ ಪೋಲೆ ಮಾತನಾಡಿದರು. ಎನ್ಎಸ್ಎಸ್ ಅಧಿಕಾರಿಗಳಾದ ಡಾ. ನಾಗೇಂದ್ರ ಕಾವಳೆ, ಡಾ. ರಾಜಕುಮಾರ, ಎಲ್. ಭಾವಿಮನಿ ಇದ್ದರು. ಸಿಮ್ರನ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.