ಭಾಲ್ಕಿ: ತಾಲ್ಲೂಕಿನ ತಳವಾಡ (ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಕಾಲಿಗೆ ಹಾವು ಕಚ್ಚಿದೆ. ಬಳಿಕ ಅವರು ಅದನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ.
ಹಾವು ಕಾಲಿಗೆ ಕಡಿದ ತಕ್ಷಣ ಅದನ್ನು ಹಿಡಿದ ಅವರು ಹಾವನ್ನು ಕೊಂದು ನಂತರ ಅದರ ಸಮೇತ ಜಿಲ್ಲಾಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದಾರೆ.
‘ವೈದ್ಯರು ಹಾವು ನೋಡಿದರೆ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಹಾವು ತಂದಿದ್ದೇನೆ’ ಎಂದು ಮಹಿಳೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.