ADVERTISEMENT

ಜನವಾಡ: ಶಂಭುಲಿಂಗೇಶ್ವರನಿಗೆ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 15:18 IST
Last Updated 2 ಸೆಪ್ಟೆಂಬರ್ 2020, 15:18 IST
ಬೀದರ್ ತಾಲ್ಲೂಕಿನ ರೇಕುಳಗಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಎನ್.ಬಿ. ರೆಡ್ಡಿ ಗುರೂಜಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು
ಬೀದರ್ ತಾಲ್ಲೂಕಿನ ರೇಕುಳಗಿಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಎನ್.ಬಿ. ರೆಡ್ಡಿ ಗುರೂಜಿ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು   

ಜನವಾಡ: ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು.

ಜಿಲ್ಲೆ ಹಾಗೂ ನೆರೆ ರಾಜ್ಯಗಳ ಭಕ್ತರು ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು.

ಪ್ರತಿ ವರ್ಷ ಅನಂತನ ಹುಣ್ಣಿಮೆ ಅಥವಾ ಜೋಕುಮಾರ ಹುಣ್ಣಿಮೆ ಸಂದರ್ಭದಲ್ಲಿ ಶಂಭುಲಿಂಗೇಶ್ವರ ರಥೋತ್ಸವ, ಜಾತ್ರೆ ನಡೆಯುವ ಸಂಪ್ರದಾಯ ಇದೆ. ಈ ವರ್ಷ ಕೋವಿಡ್19 ಕಾರಣ ಜಾತ್ರೆಗೆ ಅವಕಾಶ ಇರಲಿಲ್ಲ.

ADVERTISEMENT

ಹುಣ್ಣಿಮೆ ಮುನ್ನಾದಿನ ಪಾದಯಾತ್ರೆ ಕೈಗೊಳ್ಳುವ ಸಂಪ್ರದಾಯದ ನಿಮಿತ್ತ ಬಹುತೇಕ ಭಕ್ತರು ಪಾದಯಾತ್ರೆಯಲ್ಲಿ ಬಂದು ಶಂಭುಲಿಂಗೇಶ್ವರ ಹಾಗೂ ಬಸಮ್ಮ ತಾಯಿ ಅವರ ಗದ್ದುಗೆಯ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಎನ್.ಬಿ. ರೆಡ್ಡಿ ಗುರೂಜಿ, ಡಿವೈಎಸ್‍ಪಿ ಬಸವೇಶ್ವರ ಹೀರಾ, ಚಿಟಗುಪ್ಪ ಸಿಪಿಐ ಶರಣಬಸಪ್ಪ ಭಜಂತ್ರಿ, ಶಿವಕುಮಾರ ಸ್ವಾಮಿ, ಶ್ರೀಕಾಂತ ಪಾಟೀಲ, ಮಾರುತಿರಾವ್ ತಾಂದಳೆ ಮೊದಲಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.