ADVERTISEMENT

ಕಾಂಗ್ರೆಸ್ ಒಬಿಸಿ ವಿಭಾಗಕ್ಕೆ ಶ್ರೀನಿವಾಸ ರೆಡ್ಡಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 12:11 IST
Last Updated 26 ಜನವರಿ 2022, 12:11 IST
ಶ್ರೀನಿವಾಸ ರೆಡ್ಡಿ ಚಿಲ್ಲರ್ಗಿ
ಶ್ರೀನಿವಾಸ ರೆಡ್ಡಿ ಚಿಲ್ಲರ್ಗಿ   

ಬೀದರ್: ಕಾಂಗ್ರೆಸ್‍ನ ಇತರ ಹಿಂದುಳಿದ ವರ್ಗಗಳ ವಿಭಾಗ(ಒಬಿಸಿ)ದ ಬೀದರ್ ಉತ್ತರ ಗ್ರಾಮೀಣ ಬ್ಲಾಕ್ ಅಧ್ಯಕ್ಷರಾಗಿ ಶ್ರೀನಿವಾಸ ರೆಡ್ಡಿ ಚಿಲ್ಲರ್ಗಿ ನೇಮಕಗೊಂಡಿದ್ದಾರೆ.


ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಚಿಲ್ಲರ್ಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾಗಿರುವ ಶ್ರೀನಿವಾಸ ರೆಡ್ಡಿ ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ.

ADVERTISEMENT

ನೇಮಕಾತಿ ಪತ್ರ ವಿತರಣೆ: ಬೀದರ್‍ನ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ಶ್ರೀನಿವಾಸ ರೆಡ್ಡಿ ಅವರಿಗೆ ನೇಮಕಾತಿ ಪತ್ರ ವಿತರಿಸಿದರು.


ಶಾಸಕ ರಹೀಂಖಾನ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಒಬಿಸಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ, ಮುಖಂಡ ರೋಹಿದಾಸ ಘೋಡೆ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.