ADVERTISEMENT

ಜಿಲ್ಲಾಡಳಿತ ಕಚೇರಿ ಸಂಕೀರ್ಣ ಕಾಮಗಾರಿ ಶೀಘ್ರ ಆರಂಭಿಸಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 14:53 IST
Last Updated 9 ಆಗಸ್ಟ್ 2021, 14:53 IST
ಶ್ರೀಕಾಂತ ಸ್ವಾಮಿ
ಶ್ರೀಕಾಂತ ಸ್ವಾಮಿ   

ಬೀದರ್: ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.

ಕೇವಲ ಬೀದರ್ ನಗರದ ಎರಡು ಲಕ್ಷ ಜನರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಅಥವಾ ಜನಪ್ರತಿನಿಧಿಗಳಿಗೆ ಹೆದರಿ ಸಂಕೀರ್ಣದ ಸ್ಥಳಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಬಾರದು ಎಂದು ಹೇಳಿದ್ದಾರೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ಜನರಿಗೆ ಅನುಕೂಲ ಆಗುವ ಸ್ಥಳದಲ್ಲಿ ಸಂಕೀರ್ಣ ನಿರ್ಮಿಸಬೇಕು. ಒಂದು ತಿಂಗಳಲ್ಲಿ ಸ್ಥಳದ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.