ಜನವಾಡ: ರೈತ ದಿನಾಚರಣೆ ಪ್ರಯುಕ್ತ ಬೀದರ್ ತಾಲ್ಲೂಕಿನ ಜನವಾಡ ಹತ್ತಿರ ಇರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಡಿ. 23 ರಂದು ರಾಜ್ಯಮಟ್ಟದ ಕೃಷಿ ಕವನ ಗೋಷ್ಠಿ ಹಾಗೂ ಕೃಷಿ ಮತ್ತು ಗ್ರಾಮೀಣ ಬದುಕು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾಹಿತಿ ಪಾರ್ವತಿ ಸೋನಾರೆ ಅವರನ್ನು ಕವಿಗೋಷ್ಠಿಯ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಲಾಗಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸ ಬಯಸುವ ಸಾಹಿತಿಗಳು ಸ್ವರಚಿತ ಹಾಗೂ ಹಾಗೂ ಈ ಮೊದಲು ಪ್ರಕಟವಾಗದ ಕವನಗಳನ್ನು ಕೃಷಿ ವಿಜ್ಞಾನ ಕೇಂದ್ರಕ್ಕೆ ಕಳುಹಿಸಬಹುದು. ಇಲ್ಲವೇ ಒಂದು ಕವಿತೆಯನ್ನು ಮಾತ್ರ ಡಿಸೆಂಬರ್ 15 ರ ಸಂಜೆ 5 ಗಂಟೆಯ ಒಳಗೆ ನುಡಿ ತಂತ್ರಾಂಶದಲ್ಲಿ ಇ ಮೇಲ್ (kvkbidar2013@gmail.com) ಗೆ ಕಳುಹಿಸಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದ್ದಾರೆ.
ಕೋವಿಡ್ ಕಾರಣ ಆಯ್ದ 25 ಕವಿಗಳಿಗೆ ಕವನ ವಾಚನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗೆ 9480696318 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.