ADVERTISEMENT

ಬೀದರ್: ರಾಜ್ಯಕ್ಕೆ ಹೆಮ್ಮೆಯ ವಿಷಯ: ಖೇಣಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 7:01 IST
Last Updated 29 ಜನವರಿ 2023, 7:01 IST
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಾ ರಶೀದ್ ಅಹಮ್ಮದ್ ಖಾದ್ರಿ ಅವರನ್ನು ಮಾಜಿ ಶಾಸಕ ಅಶೋಕ ಖೇಣಿ ಅವರು ಬೀದರ್‌ನಲ್ಲಿ ಶನಿವಾರ ಸನ್ಮಾನಿಸಿದರು
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಾ ರಶೀದ್ ಅಹಮ್ಮದ್ ಖಾದ್ರಿ ಅವರನ್ನು ಮಾಜಿ ಶಾಸಕ ಅಶೋಕ ಖೇಣಿ ಅವರು ಬೀದರ್‌ನಲ್ಲಿ ಶನಿವಾರ ಸನ್ಮಾನಿಸಿದರು   

ಬೀದರ್: ಬಿದ್ರಿ ಕಲಾವಿದ ರಶೀದ್ ಅಹಮ್ಮದ್ ಖಾದ್ರಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಮಾಜಿ ಶಾಸಕ ಅಶೋಕ ಖೇಣಿ ಹೇಳಿದರು.ನಗರದಲ್ಲಿ ಶನಿವಾರ ಖಾದ್ರಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ವಿಶ್ವ ಪ್ರಸಿದ್ಧ ಬಿದ್ರಿ ಕಲೆಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ನಿರಂತರ ಶ್ರಮಿಸುತ್ತಿರುವ ಖಾದ್ರಿ ಅವರ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದರು.

ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಚನಶೆಟ್ಟಿ, ರೈತ ವಿಭಾಗದ ಅಧ್ಯಕ್ಷ ಸಂತೋಷ ಪಾಟೀಲ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸಾಜೀದ್ ಪಾಶಾ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಸೂರ್ಯಕಾಂತ ಮೋರೆ, ಮುಖಂಡರಾದ ಬಾಬುರಾವ್ ಗಂಗಾ, ಮೋಯಿನ್ ಪಠಾಣ, ಶಿವರಾಜ ಹೌಶೆಟ್ಟಿ, ಜುಬೇರ್ ಪಟೇಲ್ ಮೊದಲಾದವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.