ADVERTISEMENT

ಪಕ್ಷದ ಸಂಘಟನೆ ಇನ್ನಷ್ಟು ಬಲಪಡಿಸಿ: ‌ಸಂಸದ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 13:40 IST
Last Updated 6 ಅಕ್ಟೋಬರ್ 2020, 13:40 IST
ಬೀದರ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯನ್ನು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ದೀಪ ಬೆಳಗಿಸಿದರು
ಬೀದರ್‌ನಲ್ಲಿ ಸೋಮವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯನ್ನು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್ ದೀಪ ಬೆಳಗಿಸಿದರು   

ಬೀದರ್: ‘ಬಿಜೆಪಿಯ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪದಾಧಿಕಾರಿಗಳು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜತೆಗೆ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕು’ ಎಂದು ಸಂಸದ ಭಗವಂತ ಖೂಬಾ ಹೇಳಿದರು.

ನೌಬಾದ್‌ನ ಫಕ್ಷನ್‌ಹಾಲ್‌ನಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಿಜೆಪಿ ಜಗತ್ತಿನ ನಂಬರ್ ಒನ್ ಪಾರ್ಟಿ ಆಗಿದೆ. ಪಕ್ಷದಲ್ಲಿ ಸಂಘಟನೆಗೆ ಮೊದಲ ಆದ್ಯತೆ ಇದೆ. ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮ ಪಕ್ಷ ಆಡಳಿತದಲ್ಲಿದ್ದು, ಸರ್ಕಾರದ ಜನಪರ ಯೋಜನೆಗಳು ಜನರಿಗೆ ಮುಟ್ಟಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ತಿಳಿಸಿದರು.

ADVERTISEMENT

ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಕಲಬುರಗಿ ವಿಭಾಗ ಮಟ್ಟದ ಸಂಘಟನಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ತೂಗಾಂವಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರಹಂತ ಸಾವಳೆ, ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ಪ್ರಮುಖರಾದ ಈಶ್ವರಸಿಂಗ್ ಠಾಕೂರ್, ಶಿವರಾಜ ಗಂದಗೆ, ಜಯಕುಮಾರ ಕಾಂಗೆ, ಬಸವರಾಜ ಜೋಜನಾ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.