ಹುಲಸೂರ: ಕರಾಟೆ ಜನಪ್ರಿಯವಾಗಿರುವ ಸಮರ ಕಲೆ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗಳಲ್ಲಿ ಮತ್ತು ಕರಾಟೆ ಅಂತಹ ಸಮರ ಕಲೆ ರೂಢಿಸಿಕೊಳ್ಳಬೇಕು ಎಂದು ಕರಾಟೆ ತರಬೇತುದಾರ ಸಂತೋಷ ವಾಲಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧುವಾರ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕರಾಟೆ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಲು ಕರಾಟೆ ಅಂತಹ ಕಲೆಗಳನ್ನು ರೂಢಿಸಿಕೊಳ್ಳಬೇಕು. ಇಂದಿನ ಸಮಾಜದಲ್ಲಿ ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ಸಾಕಷ್ಟು ದೌರ್ಜನ್ಯ ನಡೆಯುತ್ತಿದೆ. ಆದರಿಂದ ವಿದ್ಯಾರ್ಥಿನಿಯರು ಸ್ವರಕ್ಷಣೆಗಾಗಿ ಕರಾಟೆ ತರಬೇತಿ ಅತ್ಯಂತ ಸೂಕ್ತ ಕಾರ್ಯಕ್ರಮವಾಗಿದೆ ಎಂದು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಸೂರ್ಯಕಾಂತ ಪಾಟಿಲ, ಶಿಕ್ಷಕಿ ರೇಣುಕಾ ಸೇರಿ ಶಾಲಾ ಮಕ್ಕಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.