ADVERTISEMENT

ಗುರಿಯಿದ್ದರೆ ಯಶಸ್ಸು ಸಾಧ್ಯ: ಡಾ. ರಾಜಶೇಖರ ಶಿವಾಚಾರ್ಯ ಅಭಿಮತ

ಡಾ. ರಾಜಶೇಖರ ಶಿವಾಚಾರ್ಯ ಅಭಿಮತ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 14:02 IST
Last Updated 22 ಜನವರಿ 2021, 14:02 IST
ಬೀದರ್‍ನ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಕರ್ನಲ್ ಜಿ.ಕೆ. ಸಿಂಗ್, ರವೀಂದ್ರ ಎಕಲಾರಕರ್, ಡಾ. ರಾಜಶೇಖರ ಶಿವಾಚಾರ್ಯ, ರೇವಣಸಿದ್ದ ಜಾಡರ್, ವಿಕಾಸ ಚೋರಮಲ್ಲೆ, ಅರವಿಂದ ಸುಂದಾಳಕರ್ ಇದ್ದರು
ಬೀದರ್‍ನ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಕರ್ನಲ್ ಜಿ.ಕೆ. ಸಿಂಗ್, ರವೀಂದ್ರ ಎಕಲಾರಕರ್, ಡಾ. ರಾಜಶೇಖರ ಶಿವಾಚಾರ್ಯ, ರೇವಣಸಿದ್ದ ಜಾಡರ್, ವಿಕಾಸ ಚೋರಮಲ್ಲೆ, ಅರವಿಂದ ಸುಂದಾಳಕರ್ ಇದ್ದರು   

ಬೀದರ್: ‘ನಿರ್ದಿಷ್ಟ ಗುರಿ ಹಾಗೂ ಗುರುವಿನ ಮಾರ್ಗದರ್ಶನವಿದ್ದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ನೌಬಾದ್‍ನ ಜ್ಞಾನ ಶಿವಯೋಗಾಶ್ರಮದ ಡಾ. ರಾಜಶೇಖರ ಶಿವಾಚಾರ್ಯ ನುಡಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಗುರುನಾನಕ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾಮಿ ವಿವೇಕಾನಂದರು ವಿಶ್ವಕ್ಕೆ ವಿವೇಕಾನಂದರಾದದ್ದು ಅವರ ಗುರು ರಾಮಕೃಷ್ಣ ಪರಮಹಂಸರ ಮಾರ್ಗದರ್ಶನದಿಂದ’ ಎಂದು ಹೇಳಿದರು.

ADVERTISEMENT

‘ಯುವಕರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಚಾರಿತ್ರ್ಯ ರೂಪಿಸಿಕೊಳ್ಳಬೇಕು. ಸಮಾಜಮುಖಿಯಾಗಿ ಬಾಳಬೇಕು’ ಎಂದರು.

ಪರಿಷತ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್ ಮಾತನಾಡಿದರು. ಡಾ. ರವೀಂದ್ರ ಎಕಲಾರಕರ್ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜು ಆಡಳಿತಾಧಿಕಾರಿ ಕರ್ನಲ್ ಜಿ.ಕೆ. ಸಿಂಗ್, ಪರಿಷತ್ ನಗರ ಘಟಕದ ಕಾರ್ಯದರ್ಶಿ ವಿಕಾಸ ಚೋರಮಲ್ಲೆ, ಪ್ರವೀಣ ಇದ್ದರು. ಅರವಿಂದ ಸುಂದಾಳಕರ್ ನಿರೂಪಿಸಿದರು. ಶಿವಕಾಂತ ಉಪ್ಪೆ ಸ್ವಾಗತಿಸಿದರು. ಆದಿತ್ಯ ಶೀಲವಂತ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.