ಬೇಲೂರು(ಹುಲಸೂರ): ಗ್ರಾಮದ ಬಳಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಬ್ಬಿನ ಜಮೀನಿಗೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗೆ ಹಾನಿಯಾಗಿದೆ.
ಬೇಲೂರು ಗ್ರಾಮದ ರೈತ ರವಿ ನಾಗಪ್ಪ ಬೆಡಜವಳಗೆ ಸೇರಿದ ಜಮೀನು ಇದಾಗಿದೆ. ಅಗ್ನಿ ಶಾಮ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಆದರೂ ಎರಡೂವರೆ ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.
ಹುಲಸೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.