ADVERTISEMENT

ಕಮಲನಗರ: ರೈಲು ಹಳಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಮೇ 2022, 5:13 IST
Last Updated 29 ಮೇ 2022, 5:13 IST

ಕಮಲನಗರ: ಪಟ್ಟಣದ ರೈಲು ನಿಲ್ದಾಣದಲ್ಲಿ ಶನಿವಾರ ರೈಲು ಹಳಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ತಾಲ್ಲೂಕಿನ ಚಾಂದುರಿ ಗ್ರಾಮದ ಸಂಗಮೇಶ ತಮ್ಮಣ್ಣ ಕುಂಬಾರ (34) ಮೃತಪಟ್ಟವರು.

ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದಾರೆ. ಕೌಟುಂಬಿಕ ಕಲಹದಿಂದ ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ADVERTISEMENT

ಈ ಸಂಬಂಧ ಬೀದರ ರೈಲ್ವೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.