ADVERTISEMENT

ವ್ಯಕ್ತಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 6:17 IST
Last Updated 8 ಜನವರಿ 2022, 6:17 IST

ಭಾಲ್ಕಿ: ತಾಲ್ಲೂಕಿನ ನೆಲವಾಡ ಗ್ರಾಮದ ನಿವಾಸಿ ಆನಂದ ಶ್ರೀಪತರಾವ್‌ (30) ಶುಕ್ರವಾರ ತಮ್ಮ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಹೈದರಾಬಾದ್‌ನಲ್ಲಿ ನೆಲೆಸಿದ್ದ ಮೃತ ವ್ಯಕ್ತಿ ಸಂಬಂಧಿಕರ ಮೋಕ್ಷಕ್ಕೆಂದು ಗ್ರಾಮಕ್ಕೆ ಬಂದಿದ್ದು, ಉಳುಮೆ ಮಾಡದ ತಮ್ಮ ಹೊಲದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಧನ್ನೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT