ಬೀದರ್: ಜುಲೈ 5 ರಿಂದ ಆಗಸ್ಟ್ 2 ವರೆಗಿನ ಎಲ್ಲ ಭಾನುವಾರ ಜಿಲ್ಲೆಯಲ್ಲಿ ಲಾಕ್ಡೌನ್ಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶಿಸಿದ್ದಾರೆ.
ಅಗತ್ಯ ಸೇವೆ ಹಾಗೂ ಅವಶ್ಯಕ ಸರಕುಗಳ ಸಾಗಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ರಾತ್ರಿ 8 ಗಂಟೆಯಿಂದ ನಸುಕಿನ ಜಾವ 5 ಗಂಟೆವರೆಗೆ ಲಾಕ್ಡೌನ್ ಇರಲಿದೆ ಎಂದು ಹೇಳಿದ್ದಾರೆ.
ಮದ್ಯ ಮಾರಾಟ ನಿಷೇಧ
ಜಿಲ್ಲೆಯಲ್ಲಿ ಜುಲೈ 5 ರಿಂದ ಆಗಸ್ಟ್ 2 ರ ವರೆಗಿನ ಎಲ್ಲ ಭಾನುವಾರ ಮದ್ಯದ ಅಂಗಡಿಗಳನ್ನು ಮುಚ್ಚಿಡಲು ಅಬಕಾರಿ ಉಪ ಆಯುಕ್ತ ಆದೇಶಿಸಿದ್ದಾರೆ. ಈ ಎಲ್ಲ ಭಾನುವಾರ ಮದ್ಯ ಮಾರಾಟ ಹಾಗೂ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ್ ಯೋಜನೆ: ಕಿರುಸಾಲಕ್ಕೆ ಅರ್ಜಿ
ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯಡಿ ವಿಶೇಷ ಕಿರು ಸಾಲಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 20 ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಭಾಲ್ಕಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪುರಸಭೆಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.