ADVERTISEMENT

ಕ್ಷೇತ್ರದ ಅಭಿವೃದ್ಧಿಗಾಗಿ ಬೆಂಬಲಿಸಿ: ಸಚಿವ ಶ್ರೀಮಂತ್ ಪಾಟೀಲ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 5:19 IST
Last Updated 12 ಏಪ್ರಿಲ್ 2021, 5:19 IST
ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಜವಳಿ ಸಚಿವ ಶ್ರೀಮಂತ್ ಪಾಟೀಲ ಮಾತನಾಡಿದರು
ಹುಲಸೂರು ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಜವಳಿ ಸಚಿವ ಶ್ರೀಮಂತ್ ಪಾಟೀಲ ಮಾತನಾಡಿದರು   

ಹುಲಸೂರ: ‘ಸಮಾಜದ ಎಲ್ಲ ಧರ್ಮ- ಸಮುದಾಯಗಳೊಂದಿಗೆ ಬೆರೆತು ಕೆಲಸ ಮಾಡುವ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಜನಸ್ನೇಹಿಯಾಗಿವೆ. ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಅಲ್ಪಸಂಖ್ಯಾತ ಕಲ್ಯಾಣ ಹಾಗೂ ಜವಳಿ ಸಚಿವ ಶ್ರೀಮಂತ್ ಪಾಟೀಲ ಹೇಳಿದರು.

ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಪಕ್ಷದ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡಿರುವ ಜನಹಿತ ಬಯಸುವ ಬಿಜೆಪಿಯ ಶರಣು ಸಲಗರ ಅವರಿಗೆ ಮತ ನೀಡಬೇಕು’ ಎಂದು ಮನವಿ ಮಾಡಿಕೊಂಡರು.

ADVERTISEMENT

ಗಡಿಗೌಡಗಾಂವ ಹಾಗೂ ಬೇಲೂರ ಗ್ರಾಮಗಳ ವಿವಿಧ ಬಡಾವಣೆಗಳಲ್ಲಿ ಸಂಚರಿಸಿದ ಶರಣು ಸಲಗರ, ಹುಲಸೂರ ಹಾಗೂ ಬಸವಕಲ್ಯಾಣ ತಾಲ್ಲೂಕುಗಳನ್ನು ಅಭಿವೃದ್ಧಿಪಡಿಸಲು ಮತ ಹಾಕಲು ಕೋರಿದರು.

ವಿಧಾನಪರಿಷತ್ ಮಾಜಿ ಸದಸ್ಯ ಎಸ್.ವೀರಯ್ಯ, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಚಲುವಾದಿ ನಾರಾಯಣ ಸ್ವಾಮಿ, ಬಿಜೆಪಿ ಮುಖಂಡ ಪದ್ಮಾಕರ್ ಪಾಟೀಲ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸಿದ್ರಾಮ ಕಾಮಣ್ಣ, ಅನಿಲ ಭೂಸಾರೆ, ಬಿಜೆಪಿ ಯುವ ಮುಖಂಡ ಸೂರ್ಯಕಾಂತ ಚಿಲ್ಲಾಬಟ್ಟೆ, ಲತಾ ಹಾರಕೂಡೆ, ಮಹೇಶ ಪಾಟೀಲ, ಭೀಮಣ್ಣ ಕೊಳ್ಳಿ, ಸಂಗಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.