ADVERTISEMENT

ಸುರಭಿ ಎನ್‍ಜಿಒ: ಕಾಲ್ನಡಿಗೆ ಜಾಥಾ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 15:39 IST
Last Updated 10 ಆಗಸ್ಟ್ 2022, 15:39 IST
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸುರಭಿ ಎನ್‍ಜಿಒ ಬೀದರ್‌ನಲ್ಲಿ ನಡೆಸಿದ ಕಾಲ್ನಡಿಗೆ ಜಾಥಾದ ಸಮಾರೋಪ ಕಾರ್ಯಕ್ರಮದಲ್ಲಿ ಮಕ್ಕಳು ರಾಷ್ಟ್ರ ಪುರುಷರ ವೇಷದಲ್ಲಿ ಕಾಣಿಸಿಕೊಂಡರು
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸುರಭಿ ಎನ್‍ಜಿಒ ಬೀದರ್‌ನಲ್ಲಿ ನಡೆಸಿದ ಕಾಲ್ನಡಿಗೆ ಜಾಥಾದ ಸಮಾರೋಪ ಕಾರ್ಯಕ್ರಮದಲ್ಲಿ ಮಕ್ಕಳು ರಾಷ್ಟ್ರ ಪುರುಷರ ವೇಷದಲ್ಲಿ ಕಾಣಿಸಿಕೊಂಡರು   


ಬೀದರ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನ ಅಂಗವಾಗಿ ಸುರಭಿ ಎನ್‍ಜಿಒ ವತಿಯಿಂದ ನಗರದಲ್ಲಿ ಬುಧವಾರ ಕಾಲ್ನಡಿಗೆ ಜಾಥಾ ನಡೆಯಿತು.
ಬಸವೇಶ್ವರ ವೃತ್ತದಿಂದ ಆರಂಭಗೊಂಡ ಜಾಥಾ ಪ್ರಮುಖ ಬೀದಿಗಳ ಮೂಲಕ ಶಿವಾಜಿ ವೃತ್ತಕ್ಕೆ ತಲುಪಿ ಸಮಾರೋಪಗೊಂಡಿತು.
ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು.
ಸುರಭಿ ಎನ್‍ಜಿಒ ಕಾರ್ಯದರ್ಶಿ ಅನುಪಮಾ ಏರೋಳಕರ್, ಪ್ರಯಾವಿ ಆಸ್ಪತ್ರೆ ಸಂಸ್ಥಾಪಕ ಡಾ. ಅಮರ ಏರೋಳಕರ್, ಬಿಡಿಎ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪ್ರಕಾಶ ಟೊಣ್ಣೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.